Menu

Uttarakhand Helicopter Crash: ಉತ್ತರಾಖಂಡ್‌- ಕೇದಾರಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಗೊಂಡು ಆರು ಸಾವು

ಡೆಹ್ರಾಡೂನ್‌ನಿಂದ  ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದದಿಂದ ದುರಂತ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಜೈಸ್ವಾಲ್ ದಂಪತಿ ಮಗುವಿನೊಂದಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳೀಯರಾದ ವಿನೋದ್ ನೇಗಿ ಮತ್ತು ವಿಕ್ರಮ್ ಸಿಂಗ್ ರಾವತ್‌ ಜೊತೆಗಿದ್ದರು. ಎಲ್ಲಾ ಮೃತದೇಹಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ. ಮೃತರನ್ನು ರಾಜ್‌ಕುಮಾರ್ ಜೈಸ್ವಾಲ್, ಶ್ರದ್ಧಾ ಜೈಸ್ವಾಲ್, ಕಾಶಿ ಜೈಸ್ವಾಲ್, ತುಸ್ತಿ ಸಿಂಗ್, ವಿನೋದ್, ವಿಕ್ರಮ್ ಸಿಂಗ್ ಮತ್ತು ಕ್ಯಾಪ್ಟನ್ ರಾಜೀವ್ ಎಂದು ಗುರುತಿಸಲಾಗಿದೆ.

ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು ನಾಪತ್ತೆಯಾದ ಹೆಲಿಕಾಪ್ಟರ್

ಬಳಿಕ ಪತನಗೊಂಡಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಮಹಾನಿರ್ದೇಶಕ ಡಾ. ವಿ. ಮುರುಗೇಶನ್ ತಿಳಿಸಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿವೆ.

ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯದಿಂದ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ಅಧಿಖಾರಿಗಳು ತಿಳಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *