ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಮದುವೆಯಾದ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿದ್ದಾಳೆ.
ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯನ್ನು ಪೋಷಕರು ಒಪ್ಪಲಿಲ್ಲ. ಮಾ.5 ರಂದು ಪ್ರಗತಿಯನ್ನು ದಿಲೀಪ್ ಎಂಬಾತನ ಜೊತೆ ಬಲವಂತವಾಗಿ ಮದುವೆ ಮಾಡಿದರು. ಮದುವೆಯಾಗಿ ಎರಡು ವಾರಗಳಷ್ಟೇ ಕಳೆದಿತ್ತು. ಪ್ರಗತಿ ಪ್ರಿಯಕರ ಅನುರಾಗ್ ಜೊತೆ ಸೇರಿ ಯೋಜನೆ ರೂಪಿಸಿ ಗಂಡನನ್ನು ಹತ್ಯೆ ಮಾಡಿಸಿದ್ದಾಳೆ. ಪತಿಯ ಕೊಲೆ ಮಾಡಲು ವ್ಯಕ್ತಿಯೊಬ್ಬನಿಗೆ 2 ಲಕ್ಷ ರೂ. ಸುಪಾರಿ ಕೊಟ್ಟಿರುವುದು ಬಯಲಾಗಿದೆ.
ಗಾಯಗೊಂಡು ಹೊಲದಲ್ಲಿ ಬಿದ್ದಿದ್ದ ದಿಲೀಪ್ನನ್ನು ಪೊಲೀಸರು ಗುರುತಿಸಿ ಬಿಧುನಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ, ಸೈಫೈ ಆಸ್ಪತ್ರೆಗೆ ದಾಖಲಿಸಿದ ಬಳಿಕ ಮಧ್ಯ ಪ್ರದೇಶದ ಗ್ವಾಲಿಯರ್, ಕೊನೆಗೆ ಔರೈಯಾದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಮೃತ ವ್ಯಕ್ತಿಯ ಸಹೋದರ ಸಹಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳಾದ ಪ್ರಗತಿ ಮತ್ತು ಅನುರಾಗ್ ಭೇಟಿಯಾಗಲು ಸಾಧ್ಯವಾಗದ ಕಾರಣ, ಇಬ್ಬರೂ ಸೇರಿಕೊಂಡು ದಿಲೀಪ್ನನ್ನು ಕೊಲ್ಲಲು ನಿರ್ಧರಿಸಿದ್ದರೆಂಬುದು ತನಿಖೆಯಿಂದ ತಿಳಿದುಬಂದಿದೆ. ಕೊಲೆ ಮಾಡಲು ರಾಮಾಜಿ ಚೌಧರಿ ಎಂಬ ಗುತ್ತಿಗೆ ಕೊಲೆ ಗಾರನಿಗೆ 2 ಲಕ್ಷ ರೂ.ನ್ನು ನೀಡಿದ್ದರು.
ರಾಮಾಜಿ ಮತ್ತು ಇತರ ಕೆಲವರು ದಿಲೀಪ್ನನ್ನು ಬೈಕ್ನಲ್ಲಿ ಹೊಲಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ಗುರುತಿಸಿ ಪೊಲೀಸರು ಬಂಧಿಸಿದ್ದರು.