ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ಗೆ ಶರಣಾಗಿದ್ದು, ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.
ವಿನಯ್ ಕುಲಕರ್ಣಿಯ ಜಾಮೀನು ರದ್ದು ಮಾಡಿ ಶರಣಾಗತಿಗೆ ಸುಪ್ರೀಂ ಕೋರ್ಟ್ ಒಂದು ವಾರದ ಗಡುವು ನೀಡಿದ್ದ ಹಿನ್ನಲೆಯಲ್ಲಿ ವಿನಯ್ ಕುಲಕರ್ಣಿ ಜನಪ್ರತಿನಿಧಿ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ವಿಚಾರಣೆ ಬಳಿಕ ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅವರನ್ನು ವಶಕ್ಕೆ ತೆಗೆದುಕೊಂಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.
ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ನಿರಾಕರಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ. ಎ9 ಆರೋಪಿ ಅಶ್ವಥ್ ಗೌಡ ಬೆದರಿಕೆ ಹಾಕಿರುವುದಾಗಿ ಕೋರ್ಟ್ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.
ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಮೆಮೋ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಸಿಐಎಸ್ಎಫ್ನಿಂದ ತನಿಖೆಗೆ ಆದೇಶಿಸಿದೆ.