ಬೆಂಗಳೂರಿನ ಜೆಜೆನಗರ ಜನತಾ ಕಾಲೋನಿಯಲ್ಲಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ವಿಜಯ್(26) ಕೊಲೆಯಾದ ಯುವಕ. ವಿಜಯ್ ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ. ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆಸಿ ದುಷ್ಕರ್ಮಿಗಳು ರಾತ್ರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಜೆಜೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.