ತುಮಕೂರು ಗ್ರಾಮಾಂತರ ಡಿ.ಹೊಸಹಳ್ಳಿಯಲ್ಲಿ ಸೋಮವಾರ ರಾತ್ರಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಪ್ರಿಯಕರನನ್ನು ವಶಕ್ಕೆ ಪಡೆದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಚೈತನ್ಯ (22). ಆಕೆಯ ಪ್ರಿಯಕರ ವಿಜಯ್ ಕುಮಾರ್. ಈತನ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚೈತನ್ಯ ತುಮಕೂರಿನ ಎಸ್.ಎಸ್.ಐ.ಟಿ ಕಾಲೇಜಿನಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮಾಡೆಲಿಂಗ್ ಕ್ಷೇತ್ರದಲ್ಲಿ ಮೇಕಪ್ ಆರ್ಟಿಸ್ಟ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಳು. ತಾಯಿ ಸೌಭಾಗ್ಯಮ್ಮ ಅವರೊಂದಿಗೆ ಡಿ.ಹೊಸಹಳ್ಳಿಯಲ್ಲಿ ವಾಸಿಸುತ್ತಿದ್ದಳು. ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ವಿಜಯ್ ಕುಮಾರ್ ಕಾರು ಚಾಲಕ. ಅವರಿಬ್ಬರ ಪ್ರೀತಿಗೆ ಯುವತಿಯ ಮಾವ ವಿರೋಧ ವ್ಯಕ್ತಪಡಿಸಿ, ಈ ಹಿಂದೆ ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಸೋಮವಾರ ರಾತ್ರಿ, ಚೈತನ್ಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ರೀಲ್ಸ್ ವೀಡಿಯೊ ಸ್ಟೇಟಸ್ಗೆ ಅಪ್ಲೋಡ್ ಮಾಡಿದ್ದಳು. ತಮ್ಮಿಬ್ಬರ ಸಂಬಂಧಕ್ಕೆ ಹಿರಿಯ ವಿರೋಧವಿದ್ದರೂ ರೀಲ್ಸ್ ಅಪ್ಲೋಡ್ ಮಾಡಿದ್ದನ್ನು ಪ್ರಶ್ನಿಸಲು ವಿಜಯ್ ಕುಮಾರ್ ರಾತ್ರಿ ಚೈತನ್ಯ ಅವರ ಮನೆಗೆ ಆಗಮಿಸಿದ್ದ. ಚೈತನ್ಯ ಅವರ ತಾಯಿ ಸೌಭಾಗ್ಯಮ್ಮ ಮಗಳೊಂದಿಗೆ ರೂಂನಲ್ಲಿದ್ದು, ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದರು. ಸಿಟ್ಟಿಗೆದ್ದ ವಿಜಯ್ ರೂಮಿನ ಕಿಟಕಿಯ ಬಳಿಯೇ ಬಂದು ಚೈತನ್ಯ ಜೊತೆಗೆ ಜಗಳವಾಡಿದ್ದ. ಆತ ಹೊರಟು ಹೋದ ಮೇಲೆ ಚೈತನ್ಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ.
ಟುಂಬಸ್ಥರು ಆಕೆಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ಆರೋಪಿಸಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ತನಿಖೆಯ ನಂತರವೇ ಸ್ಪಷ್ಟವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.